24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya
error: Content is protected !!