23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2025-26 ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಚುನಾವಣೆಯು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಇವರ ಮಾರ್ಗದರ್ಶನದಲ್ಲಿ ಶಾಲಾ ಸಹ ಶಿಕ್ಷಕರ ಸಹಯೋಗದೊಂದಿಗೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು. ಅಂತಿಮವಾಗಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಮೊಹಮ್ಮದ್ ಶುಹೈಬ್, ಆಯ್ಕೆಯಾದರು. ಕ್ರೀಡಾಮಂತ್ರಿಯಾಗಿ ಜಾಲಾಲುದ್ದಿನ್ ಮುನಾವರ್, ಶಿಕ್ಷಣ ಮಂತ್ರಿಯಾಗಿ ಮೊಹಮ್ಮದ್ ಮಾಝಿನ್, ಸಾಂಸ್ಕೃತಿಕ ಮಂತ್ರಿಯಾಗಿ ಶಾಕಿಬುಲ್ ಹಸನ್,ಆರೋಗ್ಯ ಮಂತ್ರಿಯಾಗಿ ಫಾತಿಮತ್ ಫಾಯಿಝ, ಶಿಸ್ತು ಮಂತ್ರಿಯಾಗಿ ಮೊಹಮ್ಮದ್ ಜಾಫರ್, ಪುಸ್ತಕಾಲಯದ ಮಂತ್ರಿಯಾಗಿ ಝೋಯ ಬಾನು, ಸ್ವಚ್ಛತಾ ಮಂತ್ರಿಯಾಗಿ ಅಫ್ರಿನ್ ಮರಿಯಂ ಆಯ್ಕೆಯಾದರು.

ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯು ಎಲ್ಲರ ಗಮನ ಸೆಳೆಯಿತು. ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಅವರವರ ಕರ್ತವ್ಯಗಳನ್ನು ನೆನಪಿಸಿದರು ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ನಾಯಕರುಗಳು ಶಾಲೆಯ ಏಳಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.

Related posts

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಗ್ರಾಮಸ್ಥರ ಮನವಿ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya
error: Content is protected !!