22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2025-26 ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಚುನಾವಣೆಯು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಇವರ ಮಾರ್ಗದರ್ಶನದಲ್ಲಿ ಶಾಲಾ ಸಹ ಶಿಕ್ಷಕರ ಸಹಯೋಗದೊಂದಿಗೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಾಯಕರುಗಳಿಗೆ ಮತ ಚಲಾಯಿಸಿದರು. ಅಂತಿಮವಾಗಿ ಶಾಲಾ ವಿದ್ಯಾರ್ಥಿ ನಾಯಕನಾಗಿ ಮೊಹಮ್ಮದ್ ಶುಹೈಬ್, ಆಯ್ಕೆಯಾದರು. ಕ್ರೀಡಾಮಂತ್ರಿಯಾಗಿ ಜಾಲಾಲುದ್ದಿನ್ ಮುನಾವರ್, ಶಿಕ್ಷಣ ಮಂತ್ರಿಯಾಗಿ ಮೊಹಮ್ಮದ್ ಮಾಝಿನ್, ಸಾಂಸ್ಕೃತಿಕ ಮಂತ್ರಿಯಾಗಿ ಶಾಕಿಬುಲ್ ಹಸನ್,ಆರೋಗ್ಯ ಮಂತ್ರಿಯಾಗಿ ಫಾತಿಮತ್ ಫಾಯಿಝ, ಶಿಸ್ತು ಮಂತ್ರಿಯಾಗಿ ಮೊಹಮ್ಮದ್ ಜಾಫರ್, ಪುಸ್ತಕಾಲಯದ ಮಂತ್ರಿಯಾಗಿ ಝೋಯ ಬಾನು, ಸ್ವಚ್ಛತಾ ಮಂತ್ರಿಯಾಗಿ ಅಫ್ರಿನ್ ಮರಿಯಂ ಆಯ್ಕೆಯಾದರು.

ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯು ಎಲ್ಲರ ಗಮನ ಸೆಳೆಯಿತು. ಶಾಲಾ ಮುಖ್ಯ ಉಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳಿಗೆ ಅವರವರ ಕರ್ತವ್ಯಗಳನ್ನು ನೆನಪಿಸಿದರು ಮತ್ತು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ನಾಯಕರುಗಳು ಶಾಲೆಯ ಏಳಿಗೆಗಾಗಿ ಶ್ರಮಿಸಬೇಕು ಎಂದು ಹೇಳಿದರು.

Related posts

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya
error: Content is protected !!