ಬೆಳಾಲು: ಪೆರಿಯಡ್ಕ ಸ ಕಿ ಪ್ರಾ ಶಾಲೆಯಲ್ಲಿ ಪ್ರಭಾತ್ ಸಂಸ್ಥೆ ಉಜಿರೆ ಇವರು ನಿರಂತರ 14 ವರ್ಷಗಳಿಂದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಒದಗಿಸುತ್ತಾ ಬಂದಿದ್ದು ಇದರ ವಿತರಣಾ ಸಮಾರಂಭವು ಜೂ.13ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಹಾಗೂ ಅವರ ಹೆತ್ತವರು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ, ಹಳೆಪೇಟೆ ಉಜಿರೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಕೆ ಎಂ, ಭಾಗವಹಿಸಿದರು.
ಈ ಸಂದರ್ಭದಲ್ಲಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಇವರನ್ನು ಶಾಲೆಯ ಪರವಾಗಿ ಗೌರವಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ದಾನಿಗಳಿಗೆ ಶಾಲಾ ವಿದ್ಯಾರ್ಥಿಗಳಾದ ಕುಮಾರಿ ಚಾರ್ವಿ ಹಾಗೂ ಚರಿತ ಕೃತಜ್ಞತೆಗಳನ್ನು ಸಲ್ಲಿಸಿದರು.
ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ ಬಿ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷ ಸಂತೋಷ ಮಡಿವಾಳ, ಎಸ್ ಡಿ ಎಂ ಸಿ ಸದಸ್ಯರಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.