ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಿಗೆ ಬೆಳ್ತಂಗಡಿಯ ಪೊಲೀಸ್ ಠಾಣೆ ಮುಂಭಾಗ ನೂತನವಾಗಿ ನಿರ್ಮಾಣವಾದ 2 ಅಂತಸ್ತಿನ 24 ಮನೆಗಳಿರುವ ವಸತಿಗೃಹ ಸಮುಚ್ಚಯವನ್ನು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿದ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧನ್ಯವಾದ ಸಲ್ಲಿಸಿದರು.
ಈ ಸಂದರ್ಭದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು, ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಪದ್ಮರಾಜ್ ಆರ್ ಪೂಜಾರಿ, ಶಾಹುಲ್ ಹಮೀದ್ ಉಪಸ್ಥಿರಿದ್ದರು.