ಮುಂಡಾಜೆ : ವಿವೇಕಾನಂದ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಜೂ.13 ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಮಾದಕ ದ್ರವ್ಯ ವಿರೋಧಿ ಸಂಘದ ನಿರ್ದೇಶಕರಾದ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮತ್ತು ಇನ್ನಿತರ ತಂಬಾಕು ಪದಾರ್ಥಗಳ ಸೇವನೆಯ ದುಷ್ಪರಿಣಾಮಗಳು ಹಾಗೂ ಅದರಿಂದ ದೂರವಿರುವ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಗೀತಾ ವಿದ್ಯಾರ್ಥಿಗಳಿಗೆ ತಂಬಾಕು ಸೇವನೆಯ ವಿರುದ್ಧ ಪ್ರತಿಜ್ಞೆಯನ್ನು ಬೋಧಿಸಿದರು. ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಂಬಾಕು ಸೇವನೆಯ ವಿರುದ್ಧದ ಬಿತ್ತಿಪತ್ರಗಳನ್ನು ರಚಿಸಿಲು ಮುಂದಾದರು.