24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya
error: Content is protected !!