25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya
error: Content is protected !!