32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!