22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಭೆಯು ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ. 13 ರಂದು ನಡೆಯಿತು.

ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಪ್ರಸ್ತುತ ಸಮಿತಿಯ ಉಪಾಧ್ಯಕ್ಷರಾಗಿರುವ ಮತ್ತು ಸೌತಡ್ಕ ದೇಗುಲದ ಅಭಿವೃದ್ದಿಗೆ ನಿರಂತರ ಶ್ರಮಿಸುತ್ತಿರುವ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಇವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸುಬ್ರಹ್ಮಣ್ಯ ಶಬರಾಯ ಅವರನ್ನು ಸಮಿತಿಯ ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಯಿತು. ದೇಗುಲದ ಬಳಕೆಗಾಗಿ ಕಳೆದ 20 ವರ್ಷಗಳ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದ್ದು, ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ಶ್ರಮಿಸಿದವರು ಹಾಗೂ ಸೌತಡ್ಕ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಈ ಹಿಂದೆ ಸೇವ ಸಲ್ಲಿಸಿದವರಾಗಿದ್ದಾರೆ ಹಾಗಾಗಿ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ತಿಳಿಸಿದರು.

Related posts

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya
error: Content is protected !!