ಅಳದಂಗಡಿ : ಇಲ್ಲಿಯ ನಾರಾವಿ –ಗುರುವಾಯನಕೆರೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜೂ.13ರಂದು ರಾತ್ರಿ ನಡೆದಿದೆ.
ಅಳದಂಗಡಿಯಲ್ಲಿ ಕಾರು ಚಾಲಕ ರೇಣುಕಾ ಪ್ರಸಾದ್ ಪಿ ಎಂಬವರು ಗುರುವಾಯನಕರೆ ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೇ ರಸ್ತೆಯ ಬಲ ಬದಿಗೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ರಮೇಶ್ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ರಮೇಶ್ ರವರು ರಸ್ತೆಗೆ ಬಿದ್ದು ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುತ್ತಾರೆ.
ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.