25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya
error: Content is protected !!