23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

ಬೆಳ್ತಂಗಡಿ ಧರ್ಮಪ್ರಾಂತ್ಯದ ಅಡಿಯಲ್ಲಿರುವ ಎಲ್ಲ ಶಾಲಾ ಅಧ್ಯಾಪಕರ ಪುನಃಶ್ಚೇತನ ಶಿಬಿರವು ಜೂ. 14ರಂದು ಧರ್ಮಪ್ರಾಂತ್ಯದ ಪಾಲನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಶಿಬಿರದಲ್ಲಿ ಕರ್ನಾಟಕ ರಾಜ್ಯ ಅಧ್ಯಾಪಕ ಪ್ರಶಸ್ತಿ ವಿಜೇತ ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಮೆಂಬರ್ ಹಾಗೂ ಕರ್ನಾಟಕ ಕಥೊಲಿಕ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ವಂದನೀಯ ಫಾ. ಫ್ರಾನ್ಸಿಸ್ ಅಲ್ಮೇಡಾರವರು ಅಧ್ಯಾಪಕ ವೃತ್ತಿಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.


“ಕಾಲಕ್ಕನುಗುಣವಾಗಿ ಅಧ್ಯಾಪಕರು ಬದಲಾಗಬೇಕಾಗಿದೆ. ಮಕ್ಕಳ ಈ ಕಾಲದ ವರ್ತನೆಗಳನ್ನು ತಿಳಿದು ಅವರಿಗೆ ಬೇಕಾದ ರೀತಿಯಲ್ಲಿ ಶಿಕ್ಷಣ ನೀಡುವುದು ಅಗತ್ಯ. ಕೋವಿಡ್ 19 ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಅವುಗಳನ್ನು ಅರಿತು ಬಗೆಹರಿಸುವುದು ಅಗತ್ಯದ ಕಾರ್ಯವಾಗಿದೆ” ಎಂದು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ವಂದನೀಯ ಲಾರೆನ್ಸ್ ಮುಕ್ಕುಯಿಯವರು ಹೇಳಿದರು.


ಶಿಬಿರದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನೂರು ಶತಮಾನ ಫಲಿತಾಂಶವನ್ನು ಪಡೆದ ಬಂಗಾಡಿ, ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕರನ್ನು, ಅದೇ ಶಾಲೆಯಲ್ಲಿ ಹಿಂದಿ ಅಧ್ಯಾಪಕರಾಗಿರುವ ಶ್ರೀಮತಿ ಸುಲೋಚನಾ ಇವರನ್ನು ಹಿಂದಿ ವಿಷಯದಲ್ಲಿ ಮಕ್ಕಳ ಅಸಾಧಾರಣ ಸಾಧನೆಯನ್ನು ಪರಿಗಣಿಸಿ ಗೌರವಿಸಲಾಯಿತು.


ಬೆಳ್ತಂಗಡಿ ಧರ್ಮಪ್ರಾಂತ್ಯದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ವಂದನೀಯ ಫಾ. ಶಾಜಿ ಮಾತಿಯೂ ಶಿಬಿರವನ್ನು ಸಮನ್ವಯಗೊಳಿಸಿದರು. ಶಿಬಿರದಲ್ಲಿ ಐವತ್ತಕ್ಕೂ ಹೆಚ್ಚು ಅಧ್ಯಾಪಕರು ಭಾಗವಹಿಸಿದರು.

Related posts

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya
error: Content is protected !!