23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುಚೇತನ ಪುನಃಶ್ಚೇತನ-ಬೆಳ್ತಂಗಡಿ ಧರ್ಮಪ್ರಾಂತ್ಯದ ಶಾಲಾ ಅಧ್ಯಾಪಕ ಶಿಬಿರ

ಬೆಳ್ತಂಗಡಿ ಧರ್ಮಪ್ರಾಂತ್ಯದ ಅಡಿಯಲ್ಲಿರುವ ಎಲ್ಲ ಶಾಲಾ ಅಧ್ಯಾಪಕರ ಪುನಃಶ್ಚೇತನ ಶಿಬಿರವು ಜೂ. 14ರಂದು ಧರ್ಮಪ್ರಾಂತ್ಯದ ಪಾಲನಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಶಿಬಿರದಲ್ಲಿ ಕರ್ನಾಟಕ ರಾಜ್ಯ ಅಧ್ಯಾಪಕ ಪ್ರಶಸ್ತಿ ವಿಜೇತ ರಾಜೇಂದ್ರ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಬೆಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಮೆಂಬರ್ ಹಾಗೂ ಕರ್ನಾಟಕ ಕಥೊಲಿಕ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ವಂದನೀಯ ಫಾ. ಫ್ರಾನ್ಸಿಸ್ ಅಲ್ಮೇಡಾರವರು ಅಧ್ಯಾಪಕ ವೃತ್ತಿಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.


“ಕಾಲಕ್ಕನುಗುಣವಾಗಿ ಅಧ್ಯಾಪಕರು ಬದಲಾಗಬೇಕಾಗಿದೆ. ಮಕ್ಕಳ ಈ ಕಾಲದ ವರ್ತನೆಗಳನ್ನು ತಿಳಿದು ಅವರಿಗೆ ಬೇಕಾದ ರೀತಿಯಲ್ಲಿ ಶಿಕ್ಷಣ ನೀಡುವುದು ಅಗತ್ಯ. ಕೋವಿಡ್ 19 ನಂತರ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿವೆ. ಅವುಗಳನ್ನು ಅರಿತು ಬಗೆಹರಿಸುವುದು ಅಗತ್ಯದ ಕಾರ್ಯವಾಗಿದೆ” ಎಂದು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ವಂದನೀಯ ಲಾರೆನ್ಸ್ ಮುಕ್ಕುಯಿಯವರು ಹೇಳಿದರು.


ಶಿಬಿರದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ನೂರು ಶತಮಾನ ಫಲಿತಾಂಶವನ್ನು ಪಡೆದ ಬಂಗಾಡಿ, ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕರನ್ನು, ಅದೇ ಶಾಲೆಯಲ್ಲಿ ಹಿಂದಿ ಅಧ್ಯಾಪಕರಾಗಿರುವ ಶ್ರೀಮತಿ ಸುಲೋಚನಾ ಇವರನ್ನು ಹಿಂದಿ ವಿಷಯದಲ್ಲಿ ಮಕ್ಕಳ ಅಸಾಧಾರಣ ಸಾಧನೆಯನ್ನು ಪರಿಗಣಿಸಿ ಗೌರವಿಸಲಾಯಿತು.


ಬೆಳ್ತಂಗಡಿ ಧರ್ಮಪ್ರಾಂತ್ಯದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ವಂದನೀಯ ಫಾ. ಶಾಜಿ ಮಾತಿಯೂ ಶಿಬಿರವನ್ನು ಸಮನ್ವಯಗೊಳಿಸಿದರು. ಶಿಬಿರದಲ್ಲಿ ಐವತ್ತಕ್ಕೂ ಹೆಚ್ಚು ಅಧ್ಯಾಪಕರು ಭಾಗವಹಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಉಜಿರೆಯ ಮಹಮ್ಮದ್ ರಯ್ಯಾನ್ ಕರಾಟೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!