July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

ಬೆಳಾಲು: ಪೆರಿಯಡ್ಕ ಸ ಕಿ ಪ್ರಾ ಶಾಲೆಯಲ್ಲಿ ಪ್ರಭಾತ್ ಸಂಸ್ಥೆ ಉಜಿರೆ ಇವರು ನಿರಂತರ 14 ವರ್ಷಗಳಿಂದ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಒದಗಿಸುತ್ತಾ ಬಂದಿದ್ದು ಇದರ ವಿತರಣಾ ಸಮಾರಂಭವು ಜೂ.13ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಹಾಗೂ ಅವರ ಹೆತ್ತವರು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ, ಹಳೆಪೇಟೆ ಉಜಿರೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರತಿಮಾ ಕೆ ಎಂ, ಭಾಗವಹಿಸಿದರು.

ಈ ಸಂದರ್ಭದಲ್ಲಿ ಪ್ರಭಾತ್ ಸಂಸ್ಥೆಯ ಮಾಲಕರಾದ ಶ್ರೀಮತಿ ಪ್ರಿಯಾಂಕ ಪ್ರವೀಣ್ ಭಟ್ ಇವರನ್ನು ಶಾಲೆಯ ಪರವಾಗಿ ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ದಾನಿಗಳಿಗೆ ಶಾಲಾ ವಿದ್ಯಾರ್ಥಿಗಳಾದ ಕುಮಾರಿ ಚಾರ್ವಿ ಹಾಗೂ ಚರಿತ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಹ ಶಿಕ್ಷಕಿ ಶ್ರೀಮತಿ ಜಯಶ್ರೀ ಬಿ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ನಿಕಟಪೂರ್ವ ಅಧ್ಯಕ್ಷ ಸಂತೋಷ ಮಡಿವಾಳ, ಎಸ್ ಡಿ ಎಂ ಸಿ ಸದಸ್ಯರಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!