23.7 C
ಪುತ್ತೂರು, ಬೆಳ್ತಂಗಡಿ
June 15, 2025
ಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

ಗುರುವಾಯನಕೆರೆ:ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ.

ಪ್ರವಣ್‌ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ಘಾನ್‌ 542, ಸಾನಿಕಾ – 542,ಆರುಲ್ ಡಿಸೋಜ 540,ಸಂದೀಪ್ ದುಲಾಜ್ 533, ನಿಶ್ಚಲ್ ಆ‌ರ್ ಸೊನ್ನಾದ್ 532, ಶಾಂತವ್ವ 535,ಗೌತಮ್ ಎಸ್.ಜಿ 519, ಉಲ್ಲಾಸ್ ಎಂ.ಬಿ 502,ಪ್ರತೀಕ್ಷಾ ಎಸ್ -506, ವಿಜಯ್ ಕುಮಾರ್ 508, ಕೃಪಾ ಸಾಂಚಿ ಮೌರ್ಯ 508,ಪ್ರೇಕ್ಷಾ ಕುಂದ‌ರ್ 519,ವಿನೀತ್ ಎಸ್ ಅಣ್ಣ 511,ಏರಲ್ ಸಮಿಯಾ ಡಿಸೋಜ 518,ನಿಧಿ ನಾಯ್ಡು 519,ಹರುಷ -496 ಅಂಚನ ದಿನೇಶ್ 494, ರಶ್ಮಿತಾ ಎನ್ 493,ಪಿ ಎಸ್ ಯಶಸ್ 488,ಆನಂದ ರೆಡ್ಡಿ 487, ಧನ್ಯ ಎಸ್‌ 487, ನಾಗನ ಗೌಡ 480, ಗೌತಮ್ ಕೆ ಆರ್ 475 , ಕುಮಾರ ವೈಭವ 474 ಅಂಕಗಳನ್ನು ಪಡೆದಿದ್ದಾರೆ.

ಪ್ರತಿ ಬಾರಿಯೂ ಎಕ್ಸೆಲ್ ನ ವಿದ್ಯಾರ್ಥಿಗಳು, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ರ್ಯಾಂಕ್ ಪಡೆದು ವೈದ್ಯಕೀಯ ಸೀಟ್ ಪಡೆಯುತ್ತಿದ್ದಾರೆ. ಎಕ್ಸೆಲ್ ನಲ್ಲಿ ವ್ಯಾಸಂಗ ಮಾಡಿದ ಹಲವು ವಿದ್ಯಾರ್ಥಿಗಳು ಭಾರತದ ಶ್ರೇಷ್ಠ ವೈದ್ಯಕೀಯ ಸಂಸ್ಥೆಗಳಾದ ಏಮ್ಸ್ ಸೇರಿ ಮೆಡಿಕಲ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ರಾಜ್ಯದ ಹಾಗೂ ನೆರೆ ರಾಜ್ಯಗಳ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ಕಾಲೇಜಿಗೆ ಬಂದು ವಿದ್ಯಾಭ್ಯಾಸ ಪಡೆದು ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಅತ್ಯುತ್ತಮ ಉಪನ್ಯಾಸಕರು ಇಂದು ಎಕ್ಸೆಲ್ ನಲ್ಲಿ ಇರುವುದರಿಂದ ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಎಕ್ಸೆಲ್ ತನ್ನ ಛಾಪನ್ನು ಮೂಡಿಸುತ್ತಿದೆ.

ನೀಟ್ ನಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!