23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

ಮಚ್ಚಿನ : ಇಲ್ಲಿಯ ಮುಡಿಪಿರೆ ಯಿಂದ ನಾಳ ಹಾಗೂ ಮುಡಿಪಿರೆ ಯಿಂದ ಕುವೆಟ್ಟು ರಸ್ತೆಗಳು ಇತ್ತೀಚಿಗೆ ಕಾಂಕ್ರೀಟ್ ಗೊಂಡು ಲೋಕೋಪಯೋಗಿ ಇಲಾಖೆಯಿಂದ ಮಾರ್ಗಸೂಚಿ ನಾಮಫಲಕ ಹಾಕಲಾಗಿದೆ. ಆದರೆ ಅದರಲ್ಲಿ ಊರ ಹೆಸರುಗಳನ್ನು ತಪ್ಪಾಗಿ ಮುದ್ರಿಸಿ ಊರ ಜನರನ್ನು ರೊಚ್ಚಿಗೆಲ್ವಂತೆ ಮಾಡಿದೆ.

ಇರಬೇಕಾದ ಹೆಸರುಗಳು ದೇವರಗುಂಡಿ, ಬರೆಮೇಲು, ಮರ್ಕೆ, ಪುರಳಿ, ಪಂಚಮಲಕೋಡಿ, ಬಿಳಿ ಬೈಲು,
ತಿಮ್ಮನೊಟ್ಟು, ನಾಳ, ದತ್ತ ನಗರ ಕುತ್ತಿನ, ಮುದಲಡ್ಕ ಪಯ್ಯೊಟ್ಟು, ಸಬರಬೈಲು, ಕುವೆಟ್ಟು, ಎಂದು ಆಗಬೇಕು. ಆದರೆ
ರಸ್ತೆಯ ನಾಮಫಲಕವನ್ನು ಲೋಕೋಪಯೋಗಿ ಇಲಾಖೆ ವಿಚಿತ್ರವಾದ ಹೆಸರುಗಳನ್ನು ಬರೆದು ದಾರಿ ತಪ್ಪುವಂತೆ ಮಾಡಿದೆ.

ಈ ನಾಮಫಲಕವನ್ನು ತಕ್ಷಣ ಬದಲಾವಣೆಗೊಳಿಸುವಂತೆ ಇಲಾಖೆಯಲ್ಲಿ ಊರ ಜನರ ಒತ್ತಾಯವಾಗಿದೆ. ( ಜನರು ಕೇಳುವಂತ ಪ್ರಶ್ನೆ ಒಂದು ಮಗುವಿನ ಹೆಸರಿನ ಒಂದು ಅಕ್ಷರವನ್ನು ತಿದ್ದುಪಡಿ ಮಾಡಲು ಶಾಲೆ ಲಾಯರ್ ಕೋರ್ಟು ಕಚೇರಿ ಹೀಗೆ 6ತಿಂಗಳು ಅಲೆದಾಡಿದರು ಸರಿಯಾಗುವುದಿಲ್ಲ ಆದರೆ ಲೋಕೋಪಯೋಗಿ ಇಲಾಖೆ , ಕ್ಷಣಮಾತ್ರದಲ್ಲಿ ಒಂದು ಊರಿನ ಹೆಸರನ್ನು ಬದಲಾವಣೆ ಮಾಡುತ್ತದೆ ಎಂದು ) ಒಟ್ಟಿನಲ್ಲಿ ಮಾರ್ಗಸೂಚಿ ಸರಿಯಾಗಿದ್ದರೆ ಜನರು ದಾರಿ ತಪ್ಪದಂತೆ ಮಾಡಬಹುದು.
✍️ವರದಿ: ಹರ್ಷ ಬಳ್ಳಮಂಜ

Related posts

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya
error: Content is protected !!