23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಭೆಯು ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ. 13 ರಂದು ನಡೆಯಿತು.

ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಪ್ರಸ್ತುತ ಸಮಿತಿಯ ಉಪಾಧ್ಯಕ್ಷರಾಗಿರುವ ಮತ್ತು ಸೌತಡ್ಕ ದೇಗುಲದ ಅಭಿವೃದ್ದಿಗೆ ನಿರಂತರ ಶ್ರಮಿಸುತ್ತಿರುವ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಇವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸುಬ್ರಹ್ಮಣ್ಯ ಶಬರಾಯ ಅವರನ್ನು ಸಮಿತಿಯ ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಯಿತು. ದೇಗುಲದ ಬಳಕೆಗಾಗಿ ಕಳೆದ 20 ವರ್ಷಗಳ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದ್ದು, ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ಶ್ರಮಿಸಿದವರು ಹಾಗೂ ಸೌತಡ್ಕ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಈ ಹಿಂದೆ ಸೇವ ಸಲ್ಲಿಸಿದವರಾಗಿದ್ದಾರೆ ಹಾಗಾಗಿ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ತಿಳಿಸಿದರು.

Related posts

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya
error: Content is protected !!