July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಭೆಯು ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ. 13 ರಂದು ನಡೆಯಿತು.

ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರನ್ನಾಗಿ ಪ್ರಸ್ತುತ ಸಮಿತಿಯ ಉಪಾಧ್ಯಕ್ಷರಾಗಿರುವ ಮತ್ತು ಸೌತಡ್ಕ ದೇಗುಲದ ಅಭಿವೃದ್ದಿಗೆ ನಿರಂತರ ಶ್ರಮಿಸುತ್ತಿರುವ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಇವರನ್ನು ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸುಬ್ರಹ್ಮಣ್ಯ ಶಬರಾಯ ಅವರನ್ನು ಸಮಿತಿಯ ಗೌರವ ಸಲಹೆಗಾರರನ್ನಾಗಿ ಆಯ್ಕೆ ಮಾಡಲಾಯಿತು. ದೇಗುಲದ ಬಳಕೆಗಾಗಿ ಕಳೆದ 20 ವರ್ಷಗಳ ಹಿಂದೆ ಖರೀದಿಸಲಾಗಿದ್ದ ಜಮೀನನ್ನು ಖಾಸಗಿ ಟ್ರಸ್ಟ್ ಸ್ವಾಧೀನ ಮಾಡಿಕೊಂಡಿದ್ದು, ಇದನ್ನು ಮರಳಿ ದೇಗುಲಕ್ಕೇ ಸಿಗುವಂತೆ ಮಾಡಬೇಕೆಂಬ ನಿಟ್ಟಿನಲ್ಲಿ ಪ್ರಶಾಂತ್ ರೈ ಅವರು ಮುಂಚೂಣಿಯಲ್ಲಿ ಶ್ರಮಿಸಿದವರು ಹಾಗೂ ಸೌತಡ್ಕ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಈ ಹಿಂದೆ ಸೇವ ಸಲ್ಲಿಸಿದವರಾಗಿದ್ದಾರೆ ಹಾಗಾಗಿ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ತಿಳಿಸಿದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya
error: Content is protected !!