24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

ಅಳದಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೭ನೇ ಶಾಖೆ ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.೧೫ ರಂದು ಉದ್ಘಾಟನೆಗೊಂಡಿದೆ.

17ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಶುಭ ಕೋರಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು .ಭದ್ರತಾ ಕೋಶವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ,ಅಳದಂಗಡಿ ಶ್ರೀ ಕ್ಲಿನಿಕ್‌ನ ವೈದ್ಯರಾದ ಡಾ. ಎನ್.ಎಂ. ತುಳಪುಳೆ, ಕಟ್ಟಡ ಮಾಲಕ ಸಂಜೀವ ಪೂಜಾರಿ ಗುರುದೇವ ಕೊಡಂಗೆ,ಪ್ರಗತಿಪರ ಕೃಷಿಕರಾದ ಗಂಗಾಧರ ಮಿತ್ತಮಾ‌ರ್, ಅಳದಂಗಡಿ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುಭಾಷ್ ಚಂದ್ರ ರೈ, ಅಳದಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಸುರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀ‌ರ್ ಆ‌ರ್ ಸುವರ್ಣ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಉಪಾಧ್ಯಕ್ಷ ವಿಠಲ ಬೆಳ್ಳಾಡ ಚೇಳೂರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು,ರಮೇಶ್ ಅನ್ನಪ್ಪಾಡಿ,ಗಿರೀಶ್ ಕುಮಾರ್ ಪೆರ್ವ,ಜಯಶಂಕರ್ ಕಾನ್ಸಾಲೆ,ಕೆ.ಸುಜಾತ ಎಮ್,ವಾಣಿ ವಸಂತ, ಅರುಣ್ ಕುಮಾರ್ ಎಮ್, ಆಶಿತ್ ಪೂಜಾರಿ,ಚಿದಾನಂದ ಎಂ ಕಡೇಶ್ವಾಲ್ಯ, ಅಳದಂಗಡಿ ಶಾಖಾ ವ್ಯವಸ್ಥಾಪಕಿ ಕು.ಅರ್ಪಿತಾ ಹಾಗೂ ವಿವಿಧ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!