September 6, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

Oplus_131072

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣ. ಇಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಇವರ ಮಾರ್ಗದರ್ಶನದಲ್ಲಿ ನಡೆಯಲಿದ್ದು. ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಸೆ.18 ರಂದು ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆದಿವಾಸಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!