ಅಳದಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೭ನೇ ಶಾಖೆ ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.೧೫ ರಂದು ಉದ್ಘಾಟನೆಗೊಂಡಿದೆ.

17ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಶುಭ ಕೋರಿದರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು .ಭದ್ರತಾ ಕೋಶವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ,ಅಳದಂಗಡಿ ಶ್ರೀ ಕ್ಲಿನಿಕ್ನ ವೈದ್ಯರಾದ ಡಾ. ಎನ್.ಎಂ. ತುಳಪುಳೆ, ಕಟ್ಟಡ ಮಾಲಕ ಸಂಜೀವ ಪೂಜಾರಿ ಗುರುದೇವ ಕೊಡಂಗೆ,ಪ್ರಗತಿಪರ ಕೃಷಿಕರಾದ ಗಂಗಾಧರ ಮಿತ್ತಮಾರ್, ಅಳದಂಗಡಿ ಕೃಷಿಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಸುಭಾಷ್ ಚಂದ್ರ ರೈ, ಅಳದಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು,ಸುರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಉಪಾಧ್ಯಕ್ಷ ವಿಠಲ ಬೆಳ್ಳಾಡ ಚೇಳೂರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು,ರಮೇಶ್ ಅನ್ನಪ್ಪಾಡಿ,ಗಿರೀಶ್ ಕುಮಾರ್ ಪೆರ್ವ,ಜಯಶಂಕರ್ ಕಾನ್ಸಾಲೆ,ಕೆ.ಸುಜಾತ ಎಮ್,ವಾಣಿ ವಸಂತ, ಅರುಣ್ ಕುಮಾರ್ ಎಮ್, ಆಶಿತ್ ಪೂಜಾರಿ,ಚಿದಾನಂದ ಎಂ ಕಡೇಶ್ವಾಲ್ಯ, ಅಳದಂಗಡಿ ಶಾಖಾ ವ್ಯವಸ್ಥಾಪಕಿ ಕು.ಅರ್ಪಿತಾ ಹಾಗೂ ವಿವಿಧ ಶಾಖೆಯ ವ್ಯವಸ್ಥಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.