September 6, 2026
ಗ್ರಾಮಾಂತರ ಸುದ್ದಿ

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.

ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು. ಲಾಡ್ಜ್ ನ ಮ್ಯಾನೇಜರ್ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ ಮತ್ತು ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ , ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಪ್ರತಿ ವಾರ ಲಾಡ್ಜ್ ಗಳಿಗೆ ತೆರಳಿ ಲಾಡ್ಜ್ ಲೆಡ್ಜರ್ ಪುಸ್ತಕಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಹೊಸ ಎಸ್ಪಿ ಬಂದ ಬಳಿಕ ಇತ್ತೀಚೆಗೆ ಎಲ್ಲ ಲಾಡ್ಜ್ ಮಾಲೀಕರನ್ನು ಠಾಣೆಗೆ ಕರೆಸಿ ಸಿಸಿ ಕ್ಯಾಮರ ,ಲೆಡ್ಜರ್ ಪುಸ್ತಕ, ಲಾಡ್ಜ್ ಗೆ ಬರುವ ಗ್ರಾಹಕರ ಐಡಿ ಕಾರ್ಡ್ ಸರಿಯಾಗಿ ನೋಡಿಕೊಳ್ಳಲು ವಾರ್ನಿಂಗ್ ನೀಡಿದ್ದರು‌‌. ಆದ್ರೆ ಲಾಡ್ಜ್ ಮಾಲೀಕರು ಮಾತ್ರ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು ಎನ್ನಲಾಗಿದೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya
error: Content is protected !!