ಶಿಬಾಜೆ: ಜಯರಾಮ ನೆಲ್ಲಿತ್ತಾಯ ನಮ್ಮ ಸಮಾಜದ ಆಸ್ತಿ. ಕಳೆದ 41ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅವರ ನಿರಂತರ ಸೇವೆ ಅಭಿನಂದನೀಯ. ನಮ್ಮ ಸಮಾಜ ಅವರಿಗೆ ಅಭಿನಂದನೆ ತಿಳಿಸುತ್ತದೆ. ಅವರ ಯೋಜನೆ ಮತ್ತು ಯೋಚನೆ ಇನ್ನೂ ನಮ್ಮ ಸಮಾಜಕ್ಕೆ ದೊರಕುವಂತಾಗಲಿ. ದಣಿವರಿಯದ ಕಾಯಕ ಅವರಿದ್ದಾಗಿತ್ತು. ಇನ್ನೂ ಅವರ ನಿರಂತರ ಸೇವೆಗೆ ನಮ್ಮೆಲ್ಲರಿದ್ದೂ ಸಹಕಾರ ಸಹಾಯವಿದೆ ಎಂದು ಬೆಳ್ತಂಗಡಿ ತಾಲೂಕು ಶಿವಳ್ಳಿ ಸಮಾಜದ ಅಧ್ಯಕ್ಷ ರಾಜಾರಾಮ ಪೊಲ್ನಾಯ ತಿಳಿಸಿದರು.

ಅವರು ಶಿಬಾಜೆ ಪುರಂದರ ರಾವ್ ಅವರ ಮನೆಯಲ್ಲಿ ವಲಯ ಶಿವಳ್ಳಿ ಭಾಂದವರ ವತಿಯಿಂದ ಜಯರಾಮ ನೆಲ್ಲಿತ್ತಾಯ ಮತ್ತು ರೇಖಾ ನೆಲ್ಲಿತ್ತಾಯ ದಂಪತಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಿದ್ದರು.

ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ನಿರಂತರ 41 ವರ್ಷದ ಸೇವೆಗಾಗಿ ಶಿಶಿಲ, ಶಿಭಾಜೆ, ಹತ್ಯಡ್ಕ, ರೆಖ್ಯಾ ಗ್ರಾಮದ ಸಮಾಜ ಭಾಂದವರಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ಪುರಂದರ ರಾವ್ ವಹಿಸಿದ್ದರು. ತಾಲೂಕು ನಿಕಟ ಪೂರ್ವ ಅಧ್ಯಕ್ಷ ರಾಘವೇಂದ್ರ ಬೈಪಡಿತ್ತಾಯ ಮತ್ತು ಕಾರ್ಯದರ್ಶಿ ಮುರಳೀ ಕೃಷ್ಣ ಆಚಾರ್ಯ ಅಭಿನಂದನಾ ಮಾತು ನುಡಿದರು. ಶ್ರೀಕರ ರಾವ್ ಅಭಿನಂದನಾ ಪತ್ರ ವಾಚಿಸಿದರು. ಸುಧೀರ ರಾವ್ ಅಡ್ಕಾಡಿ ಸ್ವಾಗತ ನೀಡಿದರು.
ವೇದಿಕೆಯಲ್ಲಿ ಭಾಸ್ಕರ ರಾವ್ ಮುಂಡ್ರುಪ್ಪಾಡಿ, ತಾಲೂಕು ಮಹಿಳಾ ಪದಾಧಿಕಾರಿಗಳಾದ ಜಯಾ, ಅಕ್ಷತಾ, ಜಯರಾಮ ನೆಲ್ಲಿತ್ತಾಯ, ರೇಖಾ ನೆಲ್ಲಿತ್ತಾಯ, ಗಿರೀಶ ಕುದುರೆತ್ತಾಯ ಧರ್ಮಸ್ಥಳ, ನಿಡ್ಲೆ ಲಕ್ಮೀನಾರಾಯಣ , ಜಿಲ್ಲಾಧ್ಯಕ್ಷ ಡಾ. ದಯಾಕರ ಮುಂತಾದವರು ಉಪಸ್ಥಿತರಿದ್ದರು.ಕಾರ್ಯಕ್ರಮ ನಿರ್ವಹಣೆಯನ್ನು ಕಾರ್ಯದರ್ಶಿ ಮೋಹನ ಉಪಾಧ್ಯಾಯ ಮಾಡಿದರು. ಗಿರೀಶ ಭಟ್ ವಂದಿಸಿದರು. ಪ್ರಾರ್ಥನೆಯನ್ನು ಕು.ಆರಾದ್ಯ .ಪಿ.ರಾವ್ ಮಾಡಿದರು.
ಕಾರ್ಯಕ್ರಮ ಮುಗಿದ ಬಳಿಕ ಭ್ರಾಮರಿ ಮಹಿಳಾ ಯಕ್ಷಗಾನ ವೃಂದ ಮಂಗಳೂರು ಅವರಿಂದ ಯಕ್ಷಗಾನ ತಾಳಮದ್ದಳೆ ಜರಗಿತು.