23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

Oplus_131072

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣ. ಇಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಇವರ ಮಾರ್ಗದರ್ಶನದಲ್ಲಿ ನಡೆಯಲಿದ್ದು. ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya
error: Content is protected !!