23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಧರ್ಮಸ್ಥಳ ವತಿಯಿಂದ ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕುಮಾರಿ. ಚಿನ್ಮಯಿ. ಎ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

Oplus_131072

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ, “ಪಯಣ” ಕಾರ್ ಮ್ಯೂಸಿಯಮ್ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೈವೆ, ಬ್ರಹ್ಮಪುರ, ಶ್ರೀರಂಗಪಟ್ಟಣ. ಇಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಇವರ ಮಾರ್ಗದರ್ಶನದಲ್ಲಿ ನಡೆಯಲಿದ್ದು. ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ.

ಪುರಸ್ಕಾರದ ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಪ್ರತಿ ವರ್ಷ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ನಡೆಸುತ್ತಾ ಬಂದಿದೆ ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶಕ್ತಿ: ಉಚಿತ ಪುಸ್ತಕ ವಿತರಣೆ ದೇವಾಲಯ ಮತ್ತು ಶಾಲೆ ಊರಿಗೆ ಕಲಶವಿದ್ದಂತೆ: ಶಾಸಕ ಪೂಂಜ

Suddi Udaya
error: Content is protected !!