July 23, 2026
ಗ್ರಾಮಾಂತರ ಸುದ್ದಿ

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.

ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು. ಲಾಡ್ಜ್ ನ ಮ್ಯಾನೇಜರ್ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ ಮತ್ತು ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ , ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಪ್ರತಿ ವಾರ ಲಾಡ್ಜ್ ಗಳಿಗೆ ತೆರಳಿ ಲಾಡ್ಜ್ ಲೆಡ್ಜರ್ ಪುಸ್ತಕಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಹೊಸ ಎಸ್ಪಿ ಬಂದ ಬಳಿಕ ಇತ್ತೀಚೆಗೆ ಎಲ್ಲ ಲಾಡ್ಜ್ ಮಾಲೀಕರನ್ನು ಠಾಣೆಗೆ ಕರೆಸಿ ಸಿಸಿ ಕ್ಯಾಮರ ,ಲೆಡ್ಜರ್ ಪುಸ್ತಕ, ಲಾಡ್ಜ್ ಗೆ ಬರುವ ಗ್ರಾಹಕರ ಐಡಿ ಕಾರ್ಡ್ ಸರಿಯಾಗಿ ನೋಡಿಕೊಳ್ಳಲು ವಾರ್ನಿಂಗ್ ನೀಡಿದ್ದರು‌‌. ಆದ್ರೆ ಲಾಡ್ಜ್ ಮಾಲೀಕರು ಮಾತ್ರ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು ಎನ್ನಲಾಗಿದೆ.

ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್, ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya
error: Content is protected !!