September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

ಮುಡುಕೋಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಮುಡುಕೋಡಿ ಗ್ರಾಮದ ಉಂಬೆಟ್ಟು ದ,ಕ, ಜಿ, ಪಂ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮವನ್ನು ಪಂಚಾಯತ್ ಉಪಾಧ್ಯಕ್ಷ ಉಮೇಶ್ ರವರು ಗಿಡ ನಾಟಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಶಾಲಾ ಅಭಿವೃದ್ಧಿ ಅಧ್ಯಕ್ಷ ಧನಂಜಯ ಜೈನ ಮಾತನಾಡಿ ಗಿಡಗಳು ಮಾನವನ ದೇಹದಲ್ಲಿ ಒಂದು ಭಾಗ ಅವುಗಳನ್ನು ಸರಿಯಾಗಿ ಉಳಿಸಿ ಬೆಳೆಸುವುದು ಪರಿಸರ ಸಂರಕ್ಷಣೆಯ ಬಗ್ಗೆ ಪರಿಸರದಿಂದ ಸಿಗುವ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಯೋಜನೆಯ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು ಶಾಲೆಯ ಹೊರಾಂಗಣದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡ ನಾಟಿ ಮಾಡಿದರು. ಒಕ್ಕೂಟದ ಅಧ್ಯಕ್ಷ ಹರೀಶ್ ಹಾಗೂ ಶಾಲಾ ಶಿಕ್ಷಕಿ ನಳಿನಾಕ್ಷಿ, ಸುನಂದಾ ಕೃಷಿ ಮೇಲ್ವಿಚಾರಕರು, ಕೃಷ್ಣ ವಲಯದ ಮೇಲ್ವಿಚಾರಕರು ಶ್ರೀಮತಿ ಶಾಲಿನಿ, ಶೌರ್ಯವಿಪತ್ತು ಸ್ವಯಂ ಸೇವಕರಾದ ನಾರಾಯಣ, ಕೃಷ್ಣಪ್ಪ, , ಶೀತಲ, ಮೀನಾಕ್ಷಿ, ಸದಾನಂದ (ಸಂಯೋಜಕರು) ಒಕ್ಕೂಟದ ಪದಾಧಿಕಾರಿಗಳು ದತ್ತ ಕುಮಾರ್ ಸಹ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಸೇವಾಪ್ರತಿನಿಧಿ ಜಲಜಾ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya
error: Content is protected !!