September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

ಬೆಳ್ತಂಗಡಿ : ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ ಒಂದು ದಿನದ ಹೊರ ಆವರಣ ಕೃಷಿ ತರಬೇತಿಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎನ್ನುತ್ತಾ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೃಷಿ ಅಧಿಕಾರಿ ಗಣೇಶ್ ಇವರು ಇಲಾಖಾ ಸೌಲಭ್ಯದಡಿ ಸಿಗುವ ಸವಲತ್ತುಗಳಿಗೆ ಉಂಟಾಗುವ ತಾಂತ್ರಿಕ ತೊಂದರೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿ ಇಲಾಖಾ ಮಾಹಿತಿ ನೀಡಿದರು. ಜಿಲ್ಲಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಇವರು ತೆಂಗು ಬೆಳೆ ನಿರ್ವಹಣೆ ಮತ್ತು ಅಡಿಕೆ ಕೊಳೆ ರೋಗ ಪರಿಹಾರ ಬಗ್ಗೆ ಪ್ರಾತ್ಯಕ್ಷಿಕ ಮೂಲಕ ರೈತರಿಗೆ ನೀಡಿದರು. ಒಕ್ಕೂಟದ ಕೃಷಿಸಖಿ ಭಾಗಿರಥಿ ನ್ಯಾಚುರಲ್ ಫಾರ್ಮಿಂಗ್ ಅರ್ಜಿಯ ಬಗ್ಗೆ, ಕಿಸಾನ್ ಸಮ್ಮಾನ್ ಯೋಜನೆ ಬಗ್ಗೆ, ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು. ಮಲೆಬೆಟ್ಟಿನ ಆಸುಪಾಸಿನ ರೈತರು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡಿರುತ್ತಾರೆ.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯಿತಿನ ಸದಸ್ಯರಾದ ಅನಿಲ್ ಡಿಸೋಜ, ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ದೀಪ ಜಗದೀಶ್, ಒಕ್ಕೂಟದ ಸಿಬ್ಬಂದಿಗಳಾದ ಎಮ್.ಬಿ.ಕೆ ಸುಜಾತ, ಎಲ್.ಸಿ.ಆರ್.ಪಿ ಸಚಿತ, ಪಶುಸಖಿ ಏಕಲತಾ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಸ್ವಾಗತಿಸಿ, ಕೃಷಿಕರಾದ ಗೋಪಾಲಗೌಡ ಬಾಜಿಮಾರು ವಂದಿಸಿದರು.

Related posts

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರಕ್ಕೆ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026” ಗೌರವ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya
error: Content is protected !!