23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ನಾರಾಯಣ ಪೂಜಾರಿ ಅವರು ವಿಷಯ ತಿಳಿದ ಕೂಡಲೇ ಮನೆಗೆ ಆಗಮಿಸಿ, ಶಾಸಕರಿಗೆ ಹಾಗೂ ಸ್ಥಳಿಯ ಪಂಚಾಯತ್ ಆಡಳಿತ ವ್ಯವಸ್ಥೆಗೆ ಪ್ರಸ್ತಾಪಿಸಿ, ಮನೆ ಮಂದಿಯನ್ನು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡುವಂತೆ ಮಾಡಿದ್ದಾರೆ.

ನಿನ್ನೆ ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ರೂ 10 ಸಾವಿರ ಆರ್ಥಿಕ ಸಹಕಾರ ನೀಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಪಂಚಾಯತ್ ಸದಸ್ಯ ರವಿ ಪೂಜಾರಿ ಹಾರಡ್ಡೆ,ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಇತರರು ಭೇಟಿ ನೀಡಿ ಶೀಘ್ರ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಿದರು.

Related posts

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya
error: Content is protected !!