27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ವರದಿ

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

ಕೊಕ್ಕಡ : ಮನೆಯ ಗೊದ್ರೆಜ್ ನಲ್ಲಿಟ್ಟಿದ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ರೆಖ್ಯಾದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ ಆರ್ ಗಾಣಿಗೇರ ಮತ್ತು ತಂಡ, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ: ಶ್ರೀಮತಿ ಕುಸುಮರವರು ತನ್ನ ಗಂಡ ಅಣ್ಣಿ @ ಆನಂದ ಗೌಡ ಬೆಳ್ತಂಗಡಿ ತಾಲೂಕು ರೆಖ್ಯಾ ಗ್ರಾಮದ ಕಟ್ಟೆ ಎಂಬಲ್ಲಿ ವಾಸವಿದ್ದು ಇಬ್ಬರು ದಿನಾ ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭ ಮನೆಗೆ ಬೀಗ ಹಾಕಿ ಬೀಗದ ಕೀಯನ್ನು ಕೊಟ್ಟಿಗೆಯಲ್ಲಿ ಬಚ್ಚಿಟ್ಟು ಕೆಲಸಕ್ಕೆ ಹೋಗಿ ಸಂಜೆ ವಾಪಾಸು ಮನೆಗೆ ಬರುತ್ತಿದ್ದರು. ಕುಸುಮ ಬಳಿ ಸುಮಾರು 3 ಪವನ್ ತೂಕದ ಕರಿಮಣಿ ಸರ. ಸುಮಾರು 1 ಪವನ್ ತೂಕದ ಬಳೆ, ಸುಮಾರು 2 ಪವನ್ ತೂಕದ ಚಿನ್ನದ ಚೈನ್, ಸುಮಾರು ಅರ್ಧ ಪವನ್ ತೂಕದ ಒಂದು ಜೊತೆ ಕಿವಿಯೋಳೆ ಒಟ್ಟು ರೂ 2,60,000 ರೂಪಾಯಿ ಅಂದಾಜು ಮೌಲ್ಯದ 52 ಗ್ರಾಂ ಚಿನ್ನಾಭರಣವಿತ್ತು.

ಚಿನ್ನಾಭರಣವನ್ನು ಮೇ.23 ರಂದು ಕೊನೆಯದಾಗಿ ನೋಡಿರುತ್ತಾರೆ. ಕುಸುಮ ಹಾಗೂ ಗಂಡ ಆನಂದ ಗೌಡ ಶಿರಾಡಿ ದೇವಸ್ಥಾನಕ್ಕೆ ಹೋಗುವ ಸಲುವಾಗಿ ಜೂ.14 ರಂದು ಸಂಜೆ 6.30 ಗಂಟೆ ಸುಮಾರಿಗೆ ಗೊದ್ರೆಜ್ ನಲ್ಲಿಟ್ಟ ಚಿನ್ನಾಭರಣವನ್ನು ತೆಗೆಯಲು ಹೋದಾಗ ಗೊದ್ರೆಜಿಗೆ ಹಾಕಿದ್ದ ಕೀ ಹಾಕಿದ ಸ್ಥಿತಿಯಲ್ಲಿ ಇತ್ತು. ಗೊದ್ರೆಲ್ನಲ್ಲಿಟ್ಟಿದ್ದ ಚಿನ್ನಾಭರಣ ಯಾರೋ ಕಳ್ಳರು ಕಳವು ಮಾಡಿರುತ್ತಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.15 ರಂದು ಕುಸುಮ ದೂರು ನೀಡಿದ್ದಾರೆ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
error: Content is protected !!