25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

ಉಜಿರೆ :ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.17 ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಬೆಳಿಗ್ಗೆ 9.00 ಗಂಟೆಗೆ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ನಡೆಯಲಿರುವುದು.


ಜಾಥಾಕ್ಕೆ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ ಚಾಲನೆ ನೀಡಲಿರುವರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶಿವಾನಂದ ಕಳವೆ, ಪರಿಸರ ಬರಹಗಾರರು ನಡೆಸಲಿದ್ದು, ಅಧ್ಯಕ್ಷತೆಯನ್ನು ಎಸ್. ಡಿ ಎಮ್. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್,, ವಹಿಸಲಿರವರು,.

ಮುಖ್ಯ ಅತಿಥಿಗಳಾಗಿ ಕೀರ್ತಿ ಕುಮಾರ್ ಎಸ್. ಇ. ಒ, ಕೆ. ಎಸ್.ಪಿ.ಸಿ. ಬಿ, ಮಂಗಳೂರು, ತಹಶೀಲ್ದಾರರು ಪೃಥ್ವಿ ಸಾನಿಕಮ್, ಶಿಕ್ಷಣಾಧಿಕಾರಿ ವೆಂಕಟೇಶ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಭಾಗವಹಿಸಲಿರುವರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!