July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS MS (GENERAL SURGERY) ಜನರಲ್ ಸರ್ಜನ್,ಡಾ| ಕಿರಣ್ ಕುಮಾ‌ರ್ MBBS MS (GENERAL SURGERY)ಜನರಲ್ ಸರ್ಜನ್ ಪಾಲ್ಗೊಳ್ಳುವರು.

ಶಿಬಿರದಲ್ಲಿ ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು (ಕಿಬ್ಬೊಟ್ಟೆಯ ನೋವು, ಕಾಮಾಲೆ), ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾಧಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು (ಗೆಡ್ಡೆಗಳು) ತಪಾಸಣೆ ನಡೆಯುವುದು.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ವಿ.ಸೂಚನೆ: ಸ೦ಪೂರ್ಣ ಸುರಕ್ಷಾ ವಿಮೆ ಹೊಂದಿರುವವರು ವಿಮಾ ಕಾರ್ಡಿನ ಪ್ರತಿಗಳನ್ನು ತರತಕ್ಕದ್ದು. ಹೆಸರು ನೋಂದಾಯಿಸಲು ಸಂಪರ್ಕಿಸಿ: 7760397878 / 8073349216

Related posts

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya
error: Content is protected !!