30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 4 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.


ವಿದ್ಯಾರ್ಥಿಗಳಾದ ಸುಮಂತ ಗೌಡ ಎಸ್. ಡಿ ೯೯.೯೨೩೬೮೬ ಪಸಂಟೈಲ್ ನೊಂದಿಗೆ ೫೯೬ ಅಂಕಗಳನ್ನು ಗಳಿಸಿ ರಾಷ್ಟ್ರಮಟ್ಟದಲ್ಲಿ ೧೬೨೩ನೇ ರ್‍ಯಾಂಕ್, ಪ್ರಜ್ವಲ್ ಎಸ್. ಎನ್ ೯೯.೬೮೬೪೩೫ ಪಸಂಟೈಲ್‌ನೊಂದಿಗೆ ೫೮೮ ಅಂಕಗಳನ್ನು ಗಳಿಸಿ, ರಾಷ್ಟ್ರಮಟ್ಟದಲ್ಲಿ ೨೪೮೩ನೇ ರ್‍ಯಾಂಕ್, ರಾಜೇಶ್ ಹೆಚ್ ಎ ೯೯.೮೫೭೨೮೬ ಪಸಂಟೈಲ್ ನೊಂದಿಗೆ ೫೮೩ ಅಂಕಗಳಿಸಿ ರಾಷ್ಟ್ರಮಟ್ಟದಲ್ಲಿ ೩೦೨೫ನೇ ರ್‍ಯಾಂಕ್ ಪಡೆದು ಅಭೂತಪೂರ್ವ ಸಾಧನೆಗೈದಿದ್ದಾರೆ.

ಇತರ ವಿದ್ಯಾರ್ಥಿಗಳಾದ ಸಾತ್ವಿಕ್ ಭಂಡಾರಿ 560, ಹೇಮಂತ್ ಕುಮಾರ್ 551, ಪ್ರಾಪ್ತಿ ಶೆಟ್ಟಿ 541, ಪ್ರಥಮ್ ಪಟೇಲ್ ಹೆಚ್. ಡಿ 539, ಸಂಗೀತಾ ಬಿ. ಎಮ್ ೫೩೬, ಶ್ರೀನಿಧಿ ಡಿ 531, ವಿನಯ್ ಎಸ್ ೫೨೩, ಸ್ನೇಹಾ ಬಸವರಾಜ್ ಬಿ. 521, ಯುವರಾಜ್ ಪಟೇಲ್ 521, ಗಣೇಶ್ ಜಿ 519, ಶಕ್ತಿ ಎಸ್. ಗೌಡ 519, ಸೃಷ್ಟಿ ಪಾಟೀಲ್ ೫೧೫, ಶ್ರೀನಿಧಿ ಪಿ.ಯು 514, ನಿನಾದ್ ಹೆಚ್. ಎಮ್ 513, ಪ್ರಥಮ್ ಎಸ್. ಪಿ 512, ಧ್ರುವ ಪಿ 509, ಮೇಘನಾ ಯು. ವೈ ೫೦೯, ಅಭಿನಂಧನ್ 504ಅಂಕಗಳನ್ನು ಪಡೆದು ವಿಶಿಷ್ಠ ಸಾಧನೆಗೈದಿದ್ದಾರೆ.


500ರ ಮೇಲೆ 28 ಮತ್ತು 400 ರ ಮೇಲೆ 192 ವಿದ್ಯಾರ್ಥಿಗಳು ಅಂಕಗಳನ್ನು ಪಡೆದಿರುತ್ತಾರೆ. ಕಳೆದ ಬಾರಿಯ ನೀಟ್ ಪರೀಕ್ಷೆಯ ಮೂಲಕ ಕಾಲೇಜಿನ ವಿದ್ಯಾರ್ಥಿಗಳು JIPMER, AIIMS MANGALAGIRI ಮತ್ತು AIIMS  NAGPUR ನಂತಹ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಆಯ್ಕೆಯಾಗಿದ್ದನ್ನು ಸ್ಮರಿಸಬಹುದು.


ವಿದ್ಯಾರ್ಥಿಗಳ ಈ ಸಾಧನೆಯನ್ನು ಮೆಚ್ಚಿ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರಾದ ಲೋಹಿತ್ ಎಸ್.ಕೆ, ಉಪನ್ಯಾಸಕ ವರ್ಗದವರು ಹಾಗೂ ಬೋಧಕೇತರ ವೃಂದದವರು ಶ್ಲಾಘಿಸಿದ್ದಾರೆ.

Related posts

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ನನ್ನ ವಿರುದ್ಧ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆನಾನು ತಪ್ಪು ಮಾಡಿದ್ದರೆ ಸುರುವಿಗೆ ಮಾರಿಗುಡಿ ಅಮ್ಮ ನನಗೆ ಪ್ರಾಯಶ್ಚಿತ ಮಾಡಲಿ,

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
error: Content is protected !!