23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ , ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕ ಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿ ಬೇಕು ಗಿಡವನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಮೋದ್ ಕುಮಾರ್ ಜೈನ ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ , ಆದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದೇಜಪ್ಪ ಪೂಜಾರಿ, ಬಳoಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬೂಬಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್ , ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya
error: Content is protected !!