September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ , ಪರಿಸರ ಮಾಲಿನ್ಯದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮನುಷ್ಯರು ಬದುಕ ಬೇಕಾದರೆ ಪರಿಸರ ನಮಗೆ ತೀರಾ ಅವಶ್ಯವಾಗಿ ಬೇಕು ಗಿಡವನ್ನು ನೆಟ್ಟು ಪಾಲನೆ ಪೋಷಣೆ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು. ಯೋಜನೆಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರಮೋದ್ ಕುಮಾರ್ ಜೈನ ಮಾತನಾಡಿ ಕಾಡಿನಲ್ಲಿ ಹಣ್ಣಿನ ಗಿಡವನ್ನು ನಾಟಿ ಮಾಡುವುದರಿಂದ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುತ್ತದೆ ಹಾಗೂ ಕಾಡು ಪ್ರಾಣಿಗಳ ಹಾವಳಿ ಕಡಿಮೆಯಾಗುತ್ತದೆ , ಆದರಿಂದ ಎಲ್ಲರೂ ಗಿಡಗಳನ್ನು ನೆಟ್ಟು ಅದರ ರಕ್ಷಣೆ ಮಾಡಬೇಕು ಎಂದು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ದೇಜಪ್ಪ ಪೂಜಾರಿ, ಬಳoಜ ಗ್ರಾಮ ಪಂಚಾಯತ್ ಸದಸ್ಯೆ & ವಿಪತ್ತು ಘಟಕದ ಬೇಬಿ ನಾರಾಯಣ, ಸ್ವಚ್ಛತಾ ಸೇನಾನಿ ಅಬೂಬಕರ್, ತಾಲೂಕು ನೋಡಲ್ ಅಧಿಕಾರಿ ಸುರೇಶ್ , ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿ ಪ್ರಮೀಳಾ & ಪ್ರಗತಿ ಬಂಧು, ಸ್ವಸಹಾಯ & ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya
error: Content is protected !!