23.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!