30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!