September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ

ಬೆಳ್ತಂಗಡಿ: ಮೈತ್ರಿ ಕಲಾತಂಡ ಕನಕ ನಗರ ಜೆಪಿ ನಗರ ಬೆಂಗಳೂರು ಇಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತ ಕಾರ್ಯಕ್ರಮದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ರಾಜ್ಯಮಟ್ಟದ “ರಾಷ್ಟ್ರಕವಿ ಕುವೆಂಪು ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ವೇಳೆ ಮೈತ್ರಿ ಕಲಾತಂಡದ ಅಧ್ಯಕ್ಷ ಮಹದೇವಣ್ಣ ಮಾತನಾಡಿ ಸದಾ ಧಾರ್ಮಿಕ, ಶೈಕ್ಷಣಿಕ, ಕ್ರೀಡೆ, ಶಿಕ್ಷಣ, ಆರೋಗ್ಯ ಪರಿಸರ ಸಂರಕ್ಷಣೆ ಸ್ವಚ್ಛಾಲಯ ಇಂತಹ ಕಾರ್ಯಕ್ರಮಗಳನ್ನು ಸಮಾಜದಿಂದ ಸಮಾಜಕ್ಕಾಗಿ ತನ್ನೆಲ್ಲ ಶ್ರೇಯಸ್ಸನ್ನು ಮುಡಿಪಾಗಿಟ್ಟು ಬಡವರ ಜೀವನಕ್ಕಾಗಿ ತನ್ನೆಲ್ಲ ದಿನಗಳನ್ನೇ ಮೀಸಲಿಡುವಂತಹ ರಾಜ ಕೇಸರಿ ಸಂಘಟನೆಯ ದೀಪಕ್ ಜಿ ಅಂತವರು ಈಗಿನ ಕಾಲದಲ್ಲಿ ಸಿಗುವವರು ತುಂಬಾ ವಿರಳ ಇಂತಹ ಸಂಘಟನೆಗಳು ಇನ್ನಷ್ಟು ಬೆಳೆದು ಬರಲಿ ಎಂದು ಇವರಿಗೆ ಇನ್ನಷ್ಟು ಪ್ರಶಸ್ತಿಗಳ ಬರಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದಂತಹ ಸಂಸ್ಥಾಪಕರು ಕರ್ನಾಟಕ ಜನಸೇವಾ ಟ್ರಸ್ಟ್ ರಾಷ್ಟ್ರಧ್ಯಕ್ಷ ಭಾರತೀಯ ಜನಸೇವ ಪರಿಷತ್, ಕರ್ನಾಟಕ ಪ್ರಖ್ಯಾತ ನಿರಾಶ್ರಿತರ ಸೇವಕರಾದ ಪ್ರಶಾಂತ್ ಚಕ್ರವರ್ತಿ ಅವರು ಮಾತನಾಡಿ ರಾಜಕೇಸರಿ ಸಂಘಟನೆ ಯಾರು ಮಾಡದಂತಹ ವಿಶಿಷ್ಟ ಶೈಲಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಇದು ನಮ್ಮ ರಾಜ್ಯಕ್ಕೆ ಹೆಮ್ಮೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಬಂದಿದ್ದಂತಹ ರಾಜ ಕೇಸರಿ ಪದಾಧಿಕಾರಿಗಳಿಗೆ ಕೂಡ ಸ್ಮರಣಿಕೆ ನೀಡಿ ಗೌರವಿಸಿದರು.

Related posts

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya
error: Content is protected !!