September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ನಡೆದ “ಲೋಕಾಯುಕ್ತ ಜನ ಸಂಪರ್ಕ ಸಭೆ ಜೂ. 16ರಂದು ನಡೆಯಿತು.

ತಾಲೂಕು ಕಚೇರಿಯಲ್ಲಿ 10, ತಾಲೂಕು ಪಂಚಾಯತ್ 7, ಅರಣ್ಯ ಇಲಾಖೆ 2, ಸರ್ವೇ, ಸಮಾಜ ಕಲ್ಯಾಣ, ಪೊಲೀಸ್, ಕೋಪರೇಟಿವ್ ಸೊಸೈಟಿ ಹಾಗೂ ಶಿಕ್ಷಣ ಇಲಾಖೆಗಳ ಮೇಲೆ ತಲಾ ಒಂದು ದೂರುಗಳು ಬಂದಿದ್ದು ಒಟ್ಟು 28 ದೂರಗಳು ಸಲ್ಲಿಕೆಯಾಗಿದೆ. ಜಮೀನು ಖಾತೆ, ಪ್ಲಾಂಟಿಗ್ ಕುರಿತು ಹೆಚ್ಚಿನ ಅಹವಾಲುಗಳನ್ನು ಅಧಿಕಾರಿಗಳು ಸ್ವೀಕರಿಸಿದರು.

ಲೋಕಾಯುಕ್ತ ಪ್ರಭಾರ ಅಧೀಕ್ಷಕ ಕುಮಾರಚಂದ್ರ ಸುದ್ದಿಗಾರರೊಂದಿಗೆ ಮಾತನಾಡಿ ಸಭೆಯಲ್ಲಿ ಒಟ್ಟು 28 ದೂರುಗಳು ಸಲ್ಲಿಕೆಯಾಗಿದ್ದು ಈ ಪೈಕಿ ಎರಡು ದೂರುಗಳನ್ನು ಫಾರ್ಮ್ 1,2 ರಲ್ಲಿ ರಿಜಿಸ್ಟರ್ ಮಾಡಿ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಇನ್ನೂ ಉಳಿದ ದೂರಗಳಿಗೆ ಕಾಲಮಿತಿಯಲ್ಲಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರ ಕುರಿತು ಜಾಗೃತಿ ಮೂಡಿಸಲು ಗ್ರಾಮ ಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಲು ಅವಕಾಶ ಕಲ್ಪಿಸಲು ಜಿ.ಪಂ.ಸಿಇಒ ಅವರಿಗೆ ಮನವಿ ಮಾಡಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸೇವೆಗಾಗಿ ಇರುವುದು ಅವರನ್ನು ಪದೇ ಪದೇ ಸತಾಯಿಸುವ ಕಾರ್ಯ ಮಾಡಬಾರದು. ಇತ್ತೀಚೀನ ದಿನಗಳಲ್ಲಿ ಶಿಕ್ಷಣ ಇಲಾಖೆಯ ವಿರುದ್ಧ ಅನೇಕ ದೂರುಗಳು ಬುರುತ್ತಿದೆ. ಪಿಂಚಣಿ, ರಜೆ, ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇದ್ದು ಇದರ ವಿರುದ್ಧ ದೂರ ನೀಡಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ. ಲೋಕಾಯುಕ್ತದ ನಿಯಮಗಳು ಹಾಗೂ ಭ್ರಷ್ಟಚಾರದ ಕುರಿತು ಮಾಹಿತಿ ನೀಡಿದರು.

ಡಿವೈಎಸ್ಪಿ ಸುರೇಶ್ ಕುಮಾರ್.ಪಿ, ತಾ.ಪಂ. ಇಒ ಭವಾನಿಶಂಕರ್ ಎನ್, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಇನ್ಸ್ಪೆಕ್ಟರ್ ಭಾರತಿ.ಪಿ ಮತ್ತು ಚಂದ್ರಶೇಖರ್ ಕೆ.ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲೋಕಾಯುಕ್ತ ಸಿಬ್ಬಂದಿಗಳಾದ ಮಹೇಶ್, ನಾಗಪ್ಪ, ಯತೀಶ್, ರಾಜಶೇಖರ್, ದುಂಡಪ್ಪ, ಗಂಗಣ್ಣ, ವಿವೇಕ್, ತಾಲೂಕು ಮಟ್ಟದ ಅಧಿಕಾರಿಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!