September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ಐವರು ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ (SNIC) ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಆಯ್ಕೆಗೊಂಡಿದ್ದಾರೆ.


ಜೆ.ಯು.ಓ ಯಶ್ವಿತಾ, ಸರ್ಜಂಟ್ ಆಲ್ವಿನ್ ಡಿಸೋಜಾ, ಕ್ಯಾಡೆಟ್ ನವ್ಯಾ, ಕ್ಯಾಡೆಟ್ ಕೃತಿ ಮತ್ತು ಕ್ಯಾಡೆಡ್ ಅನೀಶ್ ಆಯ್ಕೆಗೊಂಡವರು. ವಿವಿಧ ಕಾಲೇಜುಗಳ ಎನ್ ಸಿ ಸಿ ಕ್ಯಾಡೆಟ್‌ಗಳನ್ನು ಒಳಗೊಂಡ ಈ ತಂಡವು ಜೊತೆಯಲ್ಲಿ ಶ್ರೀನಗರಕ್ಕೆ ತೆರಳುತ್ತಿದೆ.


ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಈ ತಂಡದ ಮುಖ್ಯಸ್ಥರಾಗಿ ಸೆಕ್ರೆಟ್ ಹಾರ್ಟ್ ಕಾಲೇಜಿನ ಎನ್ .ಸಿ. ಸಿ ಅಧಿಕಾರಿ ಲೆಫ್ಟಿನೆಂಟ್ ಆಲ್ವಿನ್ ಕೆ.ಜಿ ಅವರನ್ನು ನೇಮಕ ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ-ಗೋವಾ ನಿರ್ದೇಶನಾಲಯವನ್ನು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವುದಕ್ಕಾಗಿ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗ ಎನ್‌ಸಿಸಿ ವಿದ್ಯಾರ್ಥಿಗಳ ಮತ್ತು ಅಧಿಕಾರಿಯ ಈ ವಿಶೇಷ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

Related posts

ಬೆಳ್ತಂಗಡಿ ಸೋಜಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ವಿಶೇಷ ದರಕಡಿತ ಮಾರಾಟ: ಸೆ.3 ರಿಂದ 30ರವರೆಗೆ ಗೃಹೋಪಯೋಗಿ ವಸ್ತುಗಳ ಖರೀದಿಗೆ ಗ್ರಾಹಕರಿಗೆ ಭರ್ಜರಿ ಅವಕಾಶ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಮಿತ್ತಬಾಗಿಲು ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!