July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ಐವರು ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ (SNIC) ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಆಯ್ಕೆಗೊಂಡಿದ್ದಾರೆ.


ಜೆ.ಯು.ಓ ಯಶ್ವಿತಾ, ಸರ್ಜಂಟ್ ಆಲ್ವಿನ್ ಡಿಸೋಜಾ, ಕ್ಯಾಡೆಟ್ ನವ್ಯಾ, ಕ್ಯಾಡೆಟ್ ಕೃತಿ ಮತ್ತು ಕ್ಯಾಡೆಡ್ ಅನೀಶ್ ಆಯ್ಕೆಗೊಂಡವರು. ವಿವಿಧ ಕಾಲೇಜುಗಳ ಎನ್ ಸಿ ಸಿ ಕ್ಯಾಡೆಟ್‌ಗಳನ್ನು ಒಳಗೊಂಡ ಈ ತಂಡವು ಜೊತೆಯಲ್ಲಿ ಶ್ರೀನಗರಕ್ಕೆ ತೆರಳುತ್ತಿದೆ.


ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಈ ತಂಡದ ಮುಖ್ಯಸ್ಥರಾಗಿ ಸೆಕ್ರೆಟ್ ಹಾರ್ಟ್ ಕಾಲೇಜಿನ ಎನ್ .ಸಿ. ಸಿ ಅಧಿಕಾರಿ ಲೆಫ್ಟಿನೆಂಟ್ ಆಲ್ವಿನ್ ಕೆ.ಜಿ ಅವರನ್ನು ನೇಮಕ ಮಾಡಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ-ಗೋವಾ ನಿರ್ದೇಶನಾಲಯವನ್ನು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವುದಕ್ಕಾಗಿ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿವರ್ಗ ಎನ್‌ಸಿಸಿ ವಿದ್ಯಾರ್ಥಿಗಳ ಮತ್ತು ಅಧಿಕಾರಿಯ ಈ ವಿಶೇಷ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದೆ.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸಂಸ್ಕೃತಿಯ ಉಳಿವಿಗಾಗಿ ಸಂಸ್ಕೃತದ ಉಳಿಯುವಿಗೆ ಮುಖ್ಯವಾಗಿದೆ : ಡಾ. ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya
error: Content is protected !!