25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

ಉಜಿರೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ  ಡಾ. ಲಕ್ಷ್ಮೀನಾರಾಯಣರವರು ಎನ್ ಎಸ್ ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ.ರವರು  ” ಎನ್ಎಸ್ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ  ಇಲ್ಲಿ ತಮ್ಮನ್ನು ಸರಿಯಾಗಿ  ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ “ಎಂದು ಹೇಳಿದರು.

ವೇದಿಕೆಯಲ್ಲಿ ಎನ್ಎಸ್ಎಸ್ ನಿಕಟಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ  ಉಪಸ್ಥಿತರಿದ್ದರು. 

ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ  ಸಂತೋಷ್ ನಿರೂಪಿಸಿ, ಸಂದೀಪ್ ಸ್ವಾಗತಿಸಿ ಸ್ವಯಂಸೇವಕಿ ಪಲ್ಲವಿ ವಂದಿಸಿದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!