23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

ಉಜಿರೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ  ಡಾ. ಲಕ್ಷ್ಮೀನಾರಾಯಣರವರು ಎನ್ ಎಸ್ ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ.ರವರು  ” ಎನ್ಎಸ್ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ  ಇಲ್ಲಿ ತಮ್ಮನ್ನು ಸರಿಯಾಗಿ  ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ “ಎಂದು ಹೇಳಿದರು.

ವೇದಿಕೆಯಲ್ಲಿ ಎನ್ಎಸ್ಎಸ್ ನಿಕಟಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ  ಉಪಸ್ಥಿತರಿದ್ದರು. 

ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ  ಸಂತೋಷ್ ನಿರೂಪಿಸಿ, ಸಂದೀಪ್ ಸ್ವಾಗತಿಸಿ ಸ್ವಯಂಸೇವಕಿ ಪಲ್ಲವಿ ವಂದಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya
error: Content is protected !!