September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್ ಡಿ ಎಂ ಪ. ಪೂ. ಕಾಲೇಜಿನ ಎನ್ಎಸ್ಎಸ್  ಸ್ವಯಂ ಸೇವಕರಿಗೆ  ಪುನಃಶ್ಚೇತನ ತರಬೇತಿ ಕಾರ್ಯಾಗಾರ.

ಉಜಿರೆ ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪುನಃಶ್ಚೇತನ ತರಬೇತಿ ಕಾರ್ಯಾಗಾರ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಎಸ್ ಡಿ ಎಂ ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪರಾದ  ಡಾ. ಲಕ್ಷ್ಮೀನಾರಾಯಣರವರು ಎನ್ ಎಸ್ ಎಸ್ ನ ಧ್ಯೇಯ,ಉದ್ದೇಶ ಕಾರ್ಯಕ್ರಮ ಮುಂತಾದ ವಿಷಯಗಳ ಕುರಿತು ತಿಳಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಾಜೇಶ್ ಬಿ.ರವರು  ” ಎನ್ಎಸ್ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒಂದು ಅವಕಾಶವಾಗಿದ್ದು, ಸ್ವಯಂ ಸೇವಕರಾಗಿ  ಇಲ್ಲಿ ತಮ್ಮನ್ನು ಸರಿಯಾಗಿ  ತೊಡಗಿಸಿಕೊಂಡಾಗ ನಿಜವಾದ ವ್ಯಕ್ತಿತ್ವ ಮೂಡಿಸಿಕೊಳ್ಳಲು ಸಾಧ್ಯ “ಎಂದು ಹೇಳಿದರು.

ವೇದಿಕೆಯಲ್ಲಿ ಎನ್ಎಸ್ಎಸ್ ನಿಕಟಪೂರ್ವ ಯೋಜನಾಧಿಕಾರಿಗಳಾದ ಡಾ. ಪ್ರಸನ್ನ ಕುಮಾರ್ ಐತಾಳ್, ಯೋಜನಾಧಿಕಾರಿಗಳಾದ ವಿಶ್ವನಾಥ್  ಎಸ್., ಸಹಯೋಜನಾಧಿಕಾರಿ ಶೋಭಾ ಪಿ  ಉಪಸ್ಥಿತರಿದ್ದರು. 

ಸ್ವಯಂ ಸೇವಕಿ  ಮೌಲ್ಯ ಅತಿಥಿಗಳ ಪರಿಚಯಿಸಿದರು. ಸ್ವಯಂ ಸೇವಕರಾದ  ಸಂತೋಷ್ ನಿರೂಪಿಸಿ, ಸಂದೀಪ್ ಸ್ವಾಗತಿಸಿ ಸ್ವಯಂಸೇವಕಿ ಪಲ್ಲವಿ ವಂದಿಸಿದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya
error: Content is protected !!