23.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

ಬೆಳ್ತಂಗಡಿ : ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ ಒಂದು ದಿನದ ಹೊರ ಆವರಣ ಕೃಷಿ ತರಬೇತಿಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಎನ್ನುತ್ತಾ ರಜತ್ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೃಷಿ ಅಧಿಕಾರಿ ಗಣೇಶ್ ಇವರು ಇಲಾಖಾ ಸೌಲಭ್ಯದಡಿ ಸಿಗುವ ಸವಲತ್ತುಗಳಿಗೆ ಉಂಟಾಗುವ ತಾಂತ್ರಿಕ ತೊಂದರೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿ ಇಲಾಖಾ ಮಾಹಿತಿ ನೀಡಿದರು. ಜಿಲ್ಲಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿ ಹಾಗೂ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಇವರು ತೆಂಗು ಬೆಳೆ ನಿರ್ವಹಣೆ ಮತ್ತು ಅಡಿಕೆ ಕೊಳೆ ರೋಗ ಪರಿಹಾರ ಬಗ್ಗೆ ಪ್ರಾತ್ಯಕ್ಷಿಕ ಮೂಲಕ ರೈತರಿಗೆ ನೀಡಿದರು. ಒಕ್ಕೂಟದ ಕೃಷಿಸಖಿ ಭಾಗಿರಥಿ ನ್ಯಾಚುರಲ್ ಫಾರ್ಮಿಂಗ್ ಅರ್ಜಿಯ ಬಗ್ಗೆ, ಕಿಸಾನ್ ಸಮ್ಮಾನ್ ಯೋಜನೆ ಬಗ್ಗೆ, ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು. ಮಲೆಬೆಟ್ಟಿನ ಆಸುಪಾಸಿನ ರೈತರು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತರಬೇತಿಯ ಪ್ರಯೋಜನ ಪಡೆದುಕೊಂಡಿರುತ್ತಾರೆ.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯಿತಿನ ಸದಸ್ಯರಾದ ಅನಿಲ್ ಡಿಸೋಜ, ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ದೀಪ ಜಗದೀಶ್, ಒಕ್ಕೂಟದ ಸಿಬ್ಬಂದಿಗಳಾದ ಎಮ್.ಬಿ.ಕೆ ಸುಜಾತ, ಎಲ್.ಸಿ.ಆರ್.ಪಿ ಸಚಿತ, ಪಶುಸಖಿ ಏಕಲತಾ ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷೆ ವಿನುತಾ ರಜತ್ ಗೌಡ ಸ್ವಾಗತಿಸಿ, ಕೃಷಿಕರಾದ ಗೋಪಾಲಗೌಡ ಬಾಜಿಮಾರು ವಂದಿಸಿದರು.

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya
error: Content is protected !!