24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ನಾರಾಯಣ ಪೂಜಾರಿ ಅವರು ವಿಷಯ ತಿಳಿದ ಕೂಡಲೇ ಮನೆಗೆ ಆಗಮಿಸಿ, ಶಾಸಕರಿಗೆ ಹಾಗೂ ಸ್ಥಳಿಯ ಪಂಚಾಯತ್ ಆಡಳಿತ ವ್ಯವಸ್ಥೆಗೆ ಪ್ರಸ್ತಾಪಿಸಿ, ಮನೆ ಮಂದಿಯನ್ನು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡುವಂತೆ ಮಾಡಿದ್ದಾರೆ.

ನಿನ್ನೆ ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ರೂ 10 ಸಾವಿರ ಆರ್ಥಿಕ ಸಹಕಾರ ನೀಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಪಂಚಾಯತ್ ಸದಸ್ಯ ರವಿ ಪೂಜಾರಿ ಹಾರಡ್ಡೆ,ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಇತರರು ಭೇಟಿ ನೀಡಿ ಶೀಘ್ರ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಮೇ 30: ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya
error: Content is protected !!