
ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ನಾರಾಯಣ ಪೂಜಾರಿ ಅವರು ವಿಷಯ ತಿಳಿದ ಕೂಡಲೇ ಮನೆಗೆ ಆಗಮಿಸಿ, ಶಾಸಕರಿಗೆ ಹಾಗೂ ಸ್ಥಳಿಯ ಪಂಚಾಯತ್ ಆಡಳಿತ ವ್ಯವಸ್ಥೆಗೆ ಪ್ರಸ್ತಾಪಿಸಿ, ಮನೆ ಮಂದಿಯನ್ನು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡುವಂತೆ ಮಾಡಿದ್ದಾರೆ.


ನಿನ್ನೆ ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ರೂ 10 ಸಾವಿರ ಆರ್ಥಿಕ ಸಹಕಾರ ನೀಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಪಂಚಾಯತ್ ಸದಸ್ಯ ರವಿ ಪೂಜಾರಿ ಹಾರಡ್ಡೆ,ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಇತರರು ಭೇಟಿ ನೀಡಿ ಶೀಘ್ರ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಿದರು.