24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ನಾರಾಯಣ ಪೂಜಾರಿ ಅವರು ವಿಷಯ ತಿಳಿದ ಕೂಡಲೇ ಮನೆಗೆ ಆಗಮಿಸಿ, ಶಾಸಕರಿಗೆ ಹಾಗೂ ಸ್ಥಳಿಯ ಪಂಚಾಯತ್ ಆಡಳಿತ ವ್ಯವಸ್ಥೆಗೆ ಪ್ರಸ್ತಾಪಿಸಿ, ಮನೆ ಮಂದಿಯನ್ನು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡುವಂತೆ ಮಾಡಿದ್ದಾರೆ.

ನಿನ್ನೆ ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ರೂ 10 ಸಾವಿರ ಆರ್ಥಿಕ ಸಹಕಾರ ನೀಡಿ ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಗಿರಿಜಾ, ಅಭಿವೃದ್ಧಿ ಅಧಿಕಾರಿ ಗಾಯತ್ರಿ, ಪಂಚಾಯತ್ ಸದಸ್ಯ ರವಿ ಪೂಜಾರಿ ಹಾರಡ್ಡೆ,ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಹಾಗೂ ಇತರರು ಭೇಟಿ ನೀಡಿ ಶೀಘ್ರ ಕ್ರಮ ಕೈಗೊಳ್ಳುವ ಬಗ್ಗೆ ಕ್ರಮ ವಹಿಸಿದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya
error: Content is protected !!