22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.17: ಉಜಿರೆ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಹಾಗೂ ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ ಕಾರ್ಯಕ್ರಮ

ಉಜಿರೆ :ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.17 ರಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು; ತಾಲೂಕು ಕಾನೂನು ಸೇವಾ ಸಮಿತಿ, ಬೆಳ್ತಂಗಡಿ; ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಪರಿಸರ ಜಾಥಾ ಬೆಳಿಗ್ಗೆ 9.00 ಗಂಟೆಗೆ ಸಿದ್ಧವನ ವೃತ್ತದಿಂದ ಉಜಿರೆ ಪೇಟೆಯವರೆಗೆ ನಡೆಯಲಿರುವುದು.


ಜಾಥಾಕ್ಕೆ ಬೆಳ್ತಂಗಡಿ ವಕೀಲರ ಸಂಘ ಅಧ್ಯಕ್ಷ ವಸಂತ ಮರಕಡ ಚಾಲನೆ ನೀಡಲಿರುವರು.

ನಂತರ ಇಂದ್ರಪ್ರಸ್ಥ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶಿವಾನಂದ ಕಳವೆ, ಪರಿಸರ ಬರಹಗಾರರು ನಡೆಸಲಿದ್ದು, ಅಧ್ಯಕ್ಷತೆಯನ್ನು ಎಸ್. ಡಿ ಎಮ್. ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್,, ವಹಿಸಲಿರವರು,.

ಮುಖ್ಯ ಅತಿಥಿಗಳಾಗಿ ಕೀರ್ತಿ ಕುಮಾರ್ ಎಸ್. ಇ. ಒ, ಕೆ. ಎಸ್.ಪಿ.ಸಿ. ಬಿ, ಮಂಗಳೂರು, ತಹಶೀಲ್ದಾರರು ಪೃಥ್ವಿ ಸಾನಿಕಮ್, ಶಿಕ್ಷಣಾಧಿಕಾರಿ ವೆಂಕಟೇಶ್, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಭಾಗವಹಿಸಲಿರುವರು.

ಪರಿಸರ ಉಪನ್ಯಾಸವನ್ನು ಡಾ.ಹೆಚ್. ಲಕ್ಷ್ಮೀಕಾಂತ, ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ನೀಡಲಿದ್ದಾರೆ ಎಂದು ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya
error: Content is protected !!